ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಬ್ರಹ್ಮಾಂಡವನ್ನೂ ರೂಪಕ್ಕೆ ಇಳಿಸಿದ್ದು ವಿಶ್ವಕರ್ಮ - ಜಯಂತಿ ಚಾರಿತ್ರಿಕ

ಕುಂದಗೋಳ: ಬ್ರಹ್ಮ ಇಡೀ ಬ್ರಹ್ಮಾಂಡವನ್ನೇ ಸೃಷ್ಟಿಸಿದನು ಎಂಬುದನ್ನು ಹಿಂದೂ ಧರ್ಮದ ಗ್ರಂಥಗಳು ಹೇಳುತ್ತವೆ. ಅದೇ ರೀತಿ ಈ ಬ್ರಹ್ಮಾಂಡವನ್ನ ರೂಪಕ್ಕೆ ಇಳಿಸಿದ್ದು ವಿಶ್ವಕರ್ಮ ಎಂದು ನಂಬಲಾಗಿದೆ. ಹೀಗಾಗಿ ವಿಶ್ವಕರ್ಮ ಜಯಂತಿಯೂ ಹುಟ್ಟಿಕೊಂಡಿತು ಎಂದು ಗ್ರೇಡ್ -2 ತಹಶೀಲ್ದಾರ್ ಶಿವಯೋಗಿ ದಾನನ್ನವರ ಹೇಳಿದರು.

ಸ್ವರ್ಗಲೋಕದಲ್ಲಿ ದೇವತೆಗಳಿಗೆ ಅರಮನೆ ನಿರ್ಮಿಸಿದವನು ಈ ವಿಶ್ವಕರ್ಮ, ದೇವರ ಆಯುಧಗಳು ಅವರ ವಾಹನಗಳ ನಿರ್ಮಾತೃ ಕೂಡ ಇದೇ ವಿಶ್ವಕರ್ಮ ಎಂಬುದು ಇತಿಹಾಸ ಹೇಳುತ್ತದೆ ಎಂದರು.

ಈ ವೇಳೆ ಗ್ರೇಡ್-2 ತಹಶೀಲ್ದಾರ್ ನೇತೃತ್ವದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ವಿಶ್ವಕರ್ಮ ಸಮಾಜದ ಬಾಂಧವರು ಉಪಸ್ಥಿತರಿದ್ದರು.

Edited By : Suman K
Kshetra Samachara

Kshetra Samachara

17/09/2024 07:06 pm

Cinque Terre

17.63 K

Cinque Terre

1

ಸಂಬಂಧಿತ ಸುದ್ದಿ