ಕುಂದಗೋಳ: ಬ್ರಹ್ಮ ಇಡೀ ಬ್ರಹ್ಮಾಂಡವನ್ನೇ ಸೃಷ್ಟಿಸಿದನು ಎಂಬುದನ್ನು ಹಿಂದೂ ಧರ್ಮದ ಗ್ರಂಥಗಳು ಹೇಳುತ್ತವೆ. ಅದೇ ರೀತಿ ಈ ಬ್ರಹ್ಮಾಂಡವನ್ನ ರೂಪಕ್ಕೆ ಇಳಿಸಿದ್ದು ವಿಶ್ವಕರ್ಮ ಎಂದು ನಂಬಲಾಗಿದೆ. ಹೀಗಾಗಿ ವಿಶ್ವಕರ್ಮ ಜಯಂತಿಯೂ ಹುಟ್ಟಿಕೊಂಡಿತು ಎಂದು ಗ್ರೇಡ್ -2 ತಹಶೀಲ್ದಾರ್ ಶಿವಯೋಗಿ ದಾನನ್ನವರ ಹೇಳಿದರು.
ಸ್ವರ್ಗಲೋಕದಲ್ಲಿ ದೇವತೆಗಳಿಗೆ ಅರಮನೆ ನಿರ್ಮಿಸಿದವನು ಈ ವಿಶ್ವಕರ್ಮ, ದೇವರ ಆಯುಧಗಳು ಅವರ ವಾಹನಗಳ ನಿರ್ಮಾತೃ ಕೂಡ ಇದೇ ವಿಶ್ವಕರ್ಮ ಎಂಬುದು ಇತಿಹಾಸ ಹೇಳುತ್ತದೆ ಎಂದರು.
ಈ ವೇಳೆ ಗ್ರೇಡ್-2 ತಹಶೀಲ್ದಾರ್ ನೇತೃತ್ವದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ವಿಶ್ವಕರ್ಮ ಸಮಾಜದ ಬಾಂಧವರು ಉಪಸ್ಥಿತರಿದ್ದರು.
Kshetra Samachara
17/09/2024 07:06 pm