ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ- ಬಸ್‌ನ್ನು ನೇರವಾಗಿ ಜಿಲ್ಲಾಸ್ಪತ್ರೆಗೆ ತಂದ ಚಾಲಕ

ಧಾರವಾಡ: ಸಾರಿಗೆ ಸಂಸ್ಥೆಯ ಬಸ್‌ನಲ್ಲೇ ಪ್ರಯಾಣಿಕನೊಬ್ಬನಿಗೆ ಹೃದಯಾಘಾತವಾಗಿದ್ದು, ಚಾಲಕ ಮತ್ತು ನಿರ್ವಾಹಕ ನೇರವಾಗಿ ಆ ಬಸ್‌ನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ತಂದ ಘಟನೆ ಧಾರವಾಡದಲ್ಲಿ ನಡೆದಿದೆ.

ದಾಂಡೇಲಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾನಿಕನೊಬ್ಬನಿಗೆ ಹೃದಯಾಘಾತವಾಗಿದೆ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಈ ಬಸ್ ಹತ್ತಿದ್ದ. ಮಾರ್ಗ ಮಧ್ಯೆ ಆತನಿಗೆ ಹೃದಯಾಘಾತವಾಗಿದೆ. ಇದನ್ನು ನೋಡಿದ ಚಾಲಕ ಮತ್ತು ನಿರ್ವಾಹಕ ತಮ್ಮ ಬಸ್‌ನ್ನು ನೇರವಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ತೆಗೆದುಕೊಂಡು ಬಂದು ಆ ಪ್ರಯಾಣಿಕನಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ.

ಆದರೆ, ಆ ಪ್ರಯಾಣಿಕ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾನೆ. ಈ ಪ್ರಯಾಣಿಕ ಯಾವ ಊರಿನವನು? ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/09/2024 07:53 pm

Cinque Terre

60.13 K

Cinque Terre

1

ಸಂಬಂಧಿತ ಸುದ್ದಿ