ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ - ಹೊರಟ್ಟಿ ಹೀಗಂದಿದ್ದ್ಯಾಕೆ?

ಧಾರವಾಡ: ರಾಜಕಾರಣದಲ್ಲಿ ಯಾವ ಸ್ಥಾನವೂ ಶಾಶ್ವತವಲ್ಲ. ಇವತ್ತು ಇರುವ ಸ್ಥಾನ ನಾಳೆಗೆ ಹೋಗಬಹುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಮಾರ್ಮಿಕವಾಗಿ ನುಡಿದರು.

ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀಗಾಗಿ ನಮ್ಮ ಮೂಲ ಉದ್ಯೋಗ ಎಂದಿಗೂ ಕೈ ಬಿಡಬಾರದು. ನಾನು ಕೂಡ ಒಕ್ಕಲುತನ ಬಿಟ್ಟಿಲ್ಲ ಎಂದು ವಿಶ್ವಕರ್ಮರ ಮೂಲ ವೃತ್ತಿ ಪ್ರಸ್ತಾಪಿಸುವ ಮೂಲಕ ತಮ್ಮ ಸಭಾಪತಿ ಸ್ಥಾನದ ಅನಿಶ್ಚಿತತೆ ಬಗ್ಗೆ ಪ್ರಸ್ತಾಪಿಸಿದ ಪ್ರಸಂಗ ನಡೆಯಿತು.

ನಮ್ಮದು ಕೃಷಿ ಮೂಲ ವೃತ್ತಿ. ಇಂದಿಗೂ ನಾನು ಕೃಷಿ ಮಾಡುತ್ತೇನೆ. ರಾಜಕಾರಣದ ಈ ಸ್ಥಾನ ಹೋದರೆ ನಾನು ಕೃಷಿ ಮಾಡುತ್ತೇನೆ. ರಾಜಕಾರಣದ ಈ ಸ್ಥಾನ ಯಾವಾಗ ಹೋಗುತ್ತದೆಯೋ ಬಿಡುತ್ತದೆಯೋ ಗೊತ್ತಿಲ್ಲ. ಇವತ್ತಿನ ರಾಜಕಾರಣ ಬಹಳ ವಿಚಿತ್ರವಾಗಿದೆ ಎಂದರು.

ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/09/2024 08:06 pm

Cinque Terre

128.57 K

Cinque Terre

0

ಸಂಬಂಧಿತ ಸುದ್ದಿ