ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ವಿಶ್ವಕರ್ಮ ಸಮಾಜದ ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು- ಡಿಸಿ ವಿದ್ಯಾಕುಮಾರಿ

ಉಡುಪಿ: ವಿಶ್ವಕರ್ಮ ಸಮಾಜ ಇತ್ತೀಚಿನ ದಿನಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಇವುಗಳನ್ನು ದಿಟ್ಟವಾಗಿ ಎದುರಿಸಿ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು. ಮುಖ್ಯವಾಗಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ನಗರದ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ವಿಶ್ವಕರ್ಮ ಸಮುದಾಯದವರ ವಾಸ್ತುಶಿಲ್ಪ ರಚನಾ ಶೈಲಿಯು ಪ್ರತಿಯೊಬ್ಬರನ್ನು ಬೆರಗುಗೊಳಿಸುತ್ತದೆ ಎಂದರು.

Edited By : PublicNext Desk
Kshetra Samachara

Kshetra Samachara

17/09/2024 09:14 pm

Cinque Terre

980

Cinque Terre

0

ಸಂಬಂಧಿತ ಸುದ್ದಿ