ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ಎಫೆಕ್ಟ್- ವಿಲ್ಸನ್ ಗಾರ್ಡನ್ ನಾಗ & ಟೀಮ್ ಬೇರೆ ಜೈಲಿಗೆ ಶಿಫ್ಟ್

ಬೆಂಗಳೂರು: ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ಬೆನ್ನಲ್ಲೇ ನಟ ದರ್ಶನ್ ಹಾಗೂ ಆತನ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿತ್ತು. ಇದಾದ ನಂತರ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಟೀಮ್ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಪೈಕಿ ನಾಗ ಕಲಬುರಗಿ ಜೈಲಿಗೆ ಸ್ಥಳಾಂತರ ಆಗುವ ಸಾಧ್ಯತೆ ಇದೆ.

ನಾಗನನ್ನು ಶಿಫ್ಟ್ ಮಾಡಲು ಬೆಂಗಳೂರು ಪೊಲೀಸರು ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಬೆಂಗಳೂರು ಪೊಲೀಸರ ಮನವಿಯಂತೆ ಜೈಲು ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.

Edited By : Nagaraj Tulugeri
PublicNext

PublicNext

17/09/2024 10:59 pm

Cinque Terre

24.3 K

Cinque Terre

0

ಸಂಬಂಧಿತ ಸುದ್ದಿ