ಬೆಂಗಳೂರು: ದರ್ಶನ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ಬೆನ್ನಲ್ಲೇ ನಟ ದರ್ಶನ್ ಹಾಗೂ ಆತನ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿತ್ತು. ಇದಾದ ನಂತರ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಟೀಮ್ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಪೈಕಿ ನಾಗ ಕಲಬುರಗಿ ಜೈಲಿಗೆ ಸ್ಥಳಾಂತರ ಆಗುವ ಸಾಧ್ಯತೆ ಇದೆ.
ನಾಗನನ್ನು ಶಿಫ್ಟ್ ಮಾಡಲು ಬೆಂಗಳೂರು ಪೊಲೀಸರು ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಬೆಂಗಳೂರು ಪೊಲೀಸರ ಮನವಿಯಂತೆ ಜೈಲು ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.
PublicNext
17/09/2024 10:59 pm