ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್ ಸಿಕ್ಕಂತಾಗಿದೆ.
PublicNext
18/09/2024 02:05 pm