ಸುಳ್ಯ: ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಕೊಡಿಯಾಲ್ಬೈಲ್ನಲ್ಲಿ ನಡೆದಿದೆ ಗಾಯಗೊಂಡವರನ್ನು ಅನ್ನಪೂರ್ಣ ಇಲೆಕ್ಟಿಕಲ್ನ ಸಿಬ್ಬಂದಿ ಭವಿತ್ ಎಂದು ಗುರುತಿಸಲಾಗಿದೆ
ವಿದ್ಯುತ್ ಕಂಬವೇರಿ ವಿದ್ಯುತ್ ತಂತಿ ಬದಲಾವಣೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್ ಸ್ಮರ್ಶಿಸಿ ವಿದ್ಯುತ್ ಶಾಕ್ ತಗುಲಿ ಕಂಬದಿಂದ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Kshetra Samachara
18/09/2024 02:11 pm