ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಸಂಗೊಳ್ಳಿ ರಾಯಣ್ಣ ಹಾಗೂ ರೈತ ಮುಖಂಡನ ಮೂರ್ತಿ ಭಗ್ನ

ನವಲಗುಂದ: ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ರೈತ ಮುಖಂಡನ ಮೂರ್ತಿ ಭಗ್ನಗೊಳಿಸಿದ ಘಟನೆ ನಡೆದಿದೆ.

ಗ್ರಾಮದ ಬಸ್ ನಿಲ್ದಾಣದ ಎದುರಿಗಿದ್ದ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ಗ್ರಾಮದಲ್ಲಿದ್ದ ಬಸಪ್ಪ ಲಕ್ಕುಂಡಿ ರೈತ ಮುಖಂಡನ ಮೂರ್ತಿ, ರಾಯಣ್ಣನ ಮೂರ್ತಿಯ ಖಡ್ಗ ಹಾಗೂ ಕೆಲ ಭಾಗದಲ್ಲಿ ಕಿಡಿಗೇಡಿಗಳು ಭಗ್ನ ಮಾಡಿದ್ದಾರೆ.

ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಘಟನೆ ಬಳಿಕ ನವಲಗುಂದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಭಗ್ನವಾಗಿರುವ ಮೂರ್ತಿಗಳಿಗೆ ಪೊಲೀಸರು ಬಟ್ಟೆ ಸುತ್ತಿದ್ದಾರೆ.. ಭಗ್ನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/09/2024 02:40 pm

Cinque Terre

23.44 K

Cinque Terre

2