ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: ಕಳೆ ಕೀಳುವಾಗ ಕಬ್ಬಿಣದ ರಿಂಗ್ ಎದೆಗೆ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಕಳೆ ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ಕೀಳುತ್ತಿರುವ ಸಂದರ್ಭ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡು ವ್ಯಕ್ತಿ ಮೃತಪಟ್ಟ ಘಟನೆ ಸೆಪ್ಟೆಂಬರ್‌ 17ರಂದು ಬೈದಿಕಜೆ ಎನ್ನುವಲ್ಲಿ ನಡೆದಿದೆ.

ಕಾಯರ್ತಡ್ಕ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಅವರು ಮೃತಪಟ್ಟ ವ್ಯಕ್ತಿ. ಇವರು ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ಬಲವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತತ್‌ಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿ ದರೂ, ದಾರಿ ಮಧ್ಯೆ ಕೊನೆಯುಸಿ ರೆಳೆದಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2024 04:21 pm

Cinque Terre

2.44 K

Cinque Terre

0

ಸಂಬಂಧಿತ ಸುದ್ದಿ