ಧಾರವಾಡ: ನವಲಗುಂದ ತಾಲೂಕಿನ ಅಳಗವಾಡಿಯಲ್ಲಿ ರೈತ ಮುಖಂಡ ದಿವಂಗತ ಬಸಪ್ಪ ಲಕ್ಕುಂಡಿಯವರ ಮೂರ್ತಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಂಗಳವಾರ ರಾತ್ರಿ ಅಳಗವಾಡಿಯಲ್ಲಿ ರೈತ ಮುಖಂಡ ಲಕ್ಕುಂಡಿಯವರ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಇದು ಇಡೀ ರೈತ ಕುಲಕ್ಕೆ ಮಾಡಿದ ಅನ್ಯಾಯವಾಗಿದ್ದು, ಕೂಡಲೇ ಆ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/09/2024 04:37 pm