ಬಜಪೆ:ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಿಯು ಕಾಲೇಜುಗಳ ಆಶ್ರಯದಲ್ಲಿ ಸುಂಕದಕಟ್ಟೆ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಟೆನ್ನಿ ಕಾಯ್ಟ್ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಿಯು ಕಾಲೇಜು ಹಾಗೂ ಬಾಲಕಿಯರ ವಿಭಾಗದಲ್ಲಿ ಸುಬ್ರಮಣ್ಯದ ಎಸ್ ಎಸ್ ಕಾಲೇಜು ತಂಡಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ರಾಜ್ಯಮಟ್ಟದ ಟೆನ್ನಿಕಾಯ್ಟ್ ಪಂದ್ಯಾಟವು ಯಾದಗಿರಿಯಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿದೆ. ಪುತ್ತೂರಿನ ಸೈಂಟ್ ಫಿಲೋಮಿನಾ ಹಾಗೂ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಿಯು ಕಾಲೇಜು ತಂಡಗಳು ಕ್ರಮವಾಗಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ರನ್ನರ್ ಅಫ್ ಪ್ರಶಸ್ತಿ ಪಡೆದುಕೊಂಡಿದೆ.
Kshetra Samachara
18/09/2024 05:20 pm