ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶ್ರೀ ಗಣೇಶೋತ್ಸವ, ಈದ್ ಮಿಲಾದ್ ಸಕ್ಸಸ್- ಜನರಿಗೆ ಥ್ಯಾಂಕ್ಸ್‌ ಎಂದ ಕಮಿಷನರ್ ಶಶಿಕುಮಾರ್

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಶಾಂತಿಯುತವಾಗಿ, ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದ ಸರ್ವ‌ ನಾಗರಿಕರಿಗೂ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಕಮಿಷನರ್,‌ ಎಲ್ಲ ಧರ್ಮಗಳ ಮುಖಂಡರು, ಶ್ರೀ ಗಣೇಶ ಮಂಡಳಿ ಮತ್ತು ಈದ್ ಮಿಲಾದ್ ಸಂಘಟನೆಯ ಮುಖಂಡರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ನಗರದ ಎಲ್ಲ ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಗಳ ಹಾಗೂ ಅಚ್ಚುಕಟ್ಟಾಗಿ ಕರ್ತವ್ಯವನ್ನು ನಿರ್ವಹಿಸಿದ ಹೊರ ಜಿಲ್ಲೆಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಬಂದಿದ್ದ ಹಾಗೂ ಹುಬ್ಬಳ್ಳಿ- ಧಾರವಾಡ ಕಮಿಷನರೇಟ್ ನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧನ್ಯವಾದಗಳು ಎಂದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/09/2024 09:09 pm

Cinque Terre

32.06 K

Cinque Terre

7

ಸಂಬಂಧಿತ ಸುದ್ದಿ