ಧಾರವಾಡ: ವ್ಯಕ್ತಿಯೊಬ್ಬ ಧಾರವಾಡದ ಕೆಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಸಾಧನಕೇರಿಯ ಮಂಗಳಗಟ್ಟಿ ಪ್ಲಾಟ್ ನಿವಾಸಿ ದಾದಾಪೀರ್ ಬಿಸ್ತಿ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.
ಈದ್ ಮಿಲಾದ್ ಹಬ್ಬದಂದೇ ಮನೆಯಿಂದ ಹೊರಹೋಗಿದ್ದ ದಾದಾಪೀರ್ ಇಂದು ಕೆಲಗೇರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಏನು ಎಂದು ಗೊತ್ತಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
18/09/2024 10:20 pm