ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ :ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪ ಕುದ್ರೋಟಿಕಟ್ಟೆಯಲ್ಲಿಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಪಲ್ಟಿ

ಬೆಳ್ತಂಗಡಿ: ಪೊಲೀಸರ ರಾಪಿಡ್ ಆಕ್ಷನ್ ಫೋರ್ಸ್(ಆರ್‌ಎಎಫ್) ನ ಲಾರಿ ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ.

ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್ ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮತ್ತೋರ್ವ ಸಿಬಂದಿ ಸಾಂತಪ್ಪನಾಯಕ್ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪುಂಜಾಲಕಟ್ಟೆ ಪೊಲೀಸರು ತಿಳಿಸಿದ್ದಾರೆ. ಜಿ.ಪಂ. ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಸ್ಥಳಕ್ಕಾಗಮಿಸಿ ಕ್ರೇನ್ ತರಿಸಿ ಲಾರಿಯನ್ನು ಮೇಲೆತ್ತಲು ಸಹಕರಿಸಿದರು.

Edited By : PublicNext Desk
Kshetra Samachara

Kshetra Samachara

18/09/2024 10:38 pm

Cinque Terre

744

Cinque Terre

0

ಸಂಬಂಧಿತ ಸುದ್ದಿ