ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವರ ಮಕ್ಕಳಿಗೆ ಮಾತ್ರ ಕೆಪಿಸಿಸಿಯಲ್ಲಿ ಸ್ಥಾನ ಎಂದಿದ್ದ ಕೈ ನಾಯಕಿ ಕವಿತಾ ರೆಡ್ಡಿಗೆ ಪಕ್ಷದಿಂದ ಅಮಾನತು

ಬೆಂಗಳೂರು: ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅವರನ್ನ ಅಮಾನತುಗೊಳಿಸಿದೆ. ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕದ ಬಗ್ಗೆ ಕವಿತಾ ರೆಡ್ಡಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ಮಹಿಳಾ ಘಟಕಕ್ಕೆ ಕವಿತಾ ರೆಡ್ಡಿ ಅಕಾಂಕ್ಷಿಯಾಗಿದ್ರು. ಆದ್ರೆ ಸಚಿವ ರಾಮಲಿಂಗ ರೆಡ್ಡಿ ಪುತ್ರಿಗೆ ಸೌಮ್ಯಾರೆಡ್ಡಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಕವಿತಾ ರೆಡ್ಡಿ ಕೆಪಿಸಿಸಿ ವಿರುದ್ಧ ಬಹಿರಂಗವಾಗಿ ಟೀಕೆ ವ್ಯಕ್ತಪಡಿಸಿದರು.

ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ ಮತ್ತು ಸಚಿವರ ಮಕ್ಕಳಿಗೆ ಕೆಪಿಸಿಸಿಯಲ್ಲಿ ಸ್ಥಾನ ಎಂದೆಲ್ಲ ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕವಿತಾ ರಡ್ಡಿ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಕಾಂಗ್ರೆಸ್‌ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಆದೇಶ ಹೊರಡಿಸಿದ್ದಾರೆ.

Edited By : Vijay Kumar
PublicNext

PublicNext

18/09/2024 11:16 pm

Cinque Terre

51.31 K

Cinque Terre

7

ಸಂಬಂಧಿತ ಸುದ್ದಿ