ಕುಂದಾಪುರ: ಬೈಕಿನಲ್ಲಿ ಬಂದ ಇಬ್ಬರು ಯುವಕರ ತಂಡ ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಏಕಾಏಕಿ ಹಲ್ಲೆ ನಡೆಸಿದ ಘಟನೆ ಬೈಂದೂರು ತಾಲೂಕಿನ ವಂಡ್ಸೆ ಎಂಬಲ್ಲಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ವಂಡ್ಸೆ ಪೆಟ್ರೋಲ್ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಕೆಂಚ್ಚಪ್ಪ (20) ಎಂಬಾತನೇ ಹಲ್ಲೆಗೊಳಗಾದ ವ್ಯಕ್ತಿ. ಮಾರಣಕಟ್ಟೆಯ ಶಬರೀಶ್ ಹಾಗೂ ಆತನ ಸ್ನೇಹಿತ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಇಬ್ಬರು ಬಂಕಿನ ಕೆಲಸಗಾರರು ಸುಮ್ಮನೆ ನೋಡುತ್ತಾ ನಿಂತಿದ್ದರು.
ಹಲ್ಲೆಗೊಳಗಾದ ಕೆಂಚಪ್ಪ ಕುಂದಾಪುರದ ಸರ್ಕಾರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/09/2024 02:09 pm