ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ನಗರದ ಜನರ ಬಸ್ ರೂಟ್ ಗೊಂದಲ ನಿವಾರಣೆ- 15 ವರ್ಷಗಳ ಸಮಸ್ಯೆಗೆ ಪರಿಹಾರ

ಉಡುಪಿ: ಅಂಬಾಗಿಲು ಗುಂಡಿ ಬೈಲ್ ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು.ಆದ್ದರಿಂದ ಅಂಬಾಗಿಲು ಗುಂಡಿಬೈಲು ಭಾಗದ ಜನರಿಗೆ 15 ವರ್ಷಗಳಿಂದ ಬಸ್ಸಿನ ಸಮಸ್ಯೆ ಕಾಡುತ್ತಿತ್ತು.

ಈ ಸಮಸ್ಯೆಗೆ ಈಗ ಮುಕ್ತಿ ಸಿಕ್ಕಿದೆ. ಇಂದು ಬೆಳಿಗ್ಗೆ ಬಸ್ಸುಗಳನ್ನು ಅಂಬಾಗಿಲು ಜಂಕ್ಷನ್ ನಲ್ಲಿ ನಿಲ್ಲಿಸಿ ಬಸ್ಸುಗಳಿಗೆ ನಾಮಫಲಕ ಅಳವಡಿಸಿ ಬಸ್ ಸಿಬ್ಬಂದಿಯೊಂದಿಗೆ ಇನ್ನು ಮುಂದೆ ಗುಂಡಿಬೈಲು ಕಲ್ಸಂಕದಿಂದ ಉಡುಪಿಗೆ ಹಾದು ಹೋಗಬೇಕಾಗಿ ವಿನಂತಿಸಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಆರ್ ಟಿ ಓ ಅಧಿಕಾರಿಗಳು ,ನಗರಸಭಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಕಕ್ಕುಂಜೆ ವಾರ್ಡಿನ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ವಾರ್ಡ್ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/09/2024 02:14 pm

Cinque Terre

640

Cinque Terre

0

ಸಂಬಂಧಿತ ಸುದ್ದಿ