ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಕುಂದಾಪುರ ತಾಲೂಕು ಕಚೇರಿ ಆವರಣದಲ್ಲಿ ಜಗಳ - ತಹಶೀಲ್ದಾರ್ ಮಧ್ಯ ಪ್ರವೇಶ

ಬೈಂದೂರು: ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಕಚೇರಿ ಆವರಣದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಜಾಗದ ವಿಷಯದಲ್ಲಿ ಒಬ್ಬರ ಮೇಲೆ ಒಬ್ಬರು ಗುದ್ದಾಟ ತಳ್ಳಾಟದ ಘಟನೆ ನಡೆದಿದೆ.

ಬುಧವಾರ ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಏಕಾಏಕಿ ಒಬ್ಬರಿಗೊಬ್ಬರು ಗಟ್ಟಿ ಧ್ವನಿಯಲ್ಲಿ ಗಲಾಟೆ ಮಾಡಿಕೊಂಡು ಜಗಳ ಆರಂಭಿಸಿದ್ದಾರೆ. ತಕ್ಷಣ ತಹಶೀಲ್ದಾರ್ ಶೋಭಾ ಲಕ್ಷ್ಮಿ ಅವರು ಆಗಮಿಸಿ ಗಲಾಟೆ ಮಾಡಿಕೊಂಡವರನ್ನು ಕಚೇರಿಯ ಕಾಂಪೌಂಡಿನ ಹೊರಗಡೆ ಹೋಗುವಂತೆ ಆದೇಶಿಸಿದರು.

ಘಟನೆಯ ವಿಷಯ ಇನ್ನಷ್ಟೇ ತಿಳಿಯಬೇಕಾಗಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.

Edited By : Somashekar
PublicNext

PublicNext

19/09/2024 02:29 pm

Cinque Terre

12.76 K

Cinque Terre

0

ಸಂಬಂಧಿತ ಸುದ್ದಿ