ಮಂಗಳೂರು: ಶ್ರೀ ದುರ್ಗಾಪರಮೇಶ್ವರಿ, ನವಗುಳಿಗ ಹಾಗೂ ಸ್ವಾಮಿ ಕೊರಗಜ್ಜ ದೈವ ಸನ್ನಿಧಿ ಬರ್ಕಜೆ, ವೇಣೂರು ದಕ್ಷಿಣ ಕನ್ನಡ ಜಿಲ್ಲೆ ಈ ಕ್ಷೇತ್ರದಲ್ಲಿ ಈ ಬಾರಿಯ ನವರಾತ್ರಿ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಅಕ್ಟೋಬರ್ 3ರಿಂದ 16ರ ತನಕ ನವರಾತ್ರಿ ಮಹೋತ್ಸವ ನಡೆಯಲಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯಲಿರುವ ವೈದಿಕ, ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಅವರ ನೇತೃತ್ವದಲ್ಲಿ ಭಕ್ತರ ಸಮ್ಮುಖದಲ್ಲಿ ಸಭೆ ಜರುಗಿತು. ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತರು ಭಾಗವಹಿಸಿದ್ದರು.
Kshetra Samachara
19/09/2024 05:15 pm