ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಂಚ ಗ್ಯಾರಂಟಿ ಸಭೆ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ

ಕುಂದಗೋಳ : ಗೃಹಲಕ್ಷ್ಮಿ ಹಣ ಪಡೆಯದಿರುವ ಅರ್ಹ ಫಲಾನುಭವಿಗಳ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳಬೇಕು, ಸಾರಿಗೆ ಸಮಸ್ಯೆಗೆ ಕ್ರಮ ಕೈಗೊಂಡು ಶಕ್ತಿ ಯೋಜನೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಹೇಳಿದರು.

ಅವರು ಕುಂದಗೋಳ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಸೇರಿದಂತೆ ಯುವನಿಧಿ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ದತ್ತಾಂಶ ಸಂಗ್ರಹಿಸಿ ಡಿಬಿಟಿ ಹಣ ಬಾರದ ಜನರಿಗೆ ತಾಂತ್ರಿಕ ಸಮಸ್ಯೆ ಎದುರಾಗಿವೆ ಅದನ್ನು ನಿವಾರಿಸುವ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ಗೃಹ ಜ್ಯೋತಿ ಸಮರ್ಪಕವಾಗಿದೆ, ನೂತನ ಮೀಟರ್ ಅಳವಡಿಕೆ ಮಾಡಿಕೊಂಡ ಕುಟುಂಬಗಳಿಗೂ ಗೃಹಲಕ್ಷ್ಮಿ ಸೌಲಭ್ಯ ವಿಸ್ತರಿಸಿರಿ ಎಂಬ ವಿಷಯ ಪ್ರಸ್ತಾಪ ಮಾಡಲಾಯಿತು.

ಯುವನಿಧಿ ನೋಂದಣಿ ಹೆಚ್ಚಳದ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು, ಈ ಸಭೆಯಲ್ಲಿ ತಹಶೀಲ್ದಾರ್ ರಾಜು ಮಾವರಕರ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/09/2024 05:17 pm

Cinque Terre

4.57 K

Cinque Terre

0

ಸಂಬಂಧಿತ ಸುದ್ದಿ