ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ರೇಪ್ ಕೇಸ್ ವಿಚಾರಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ಸಂತ್ರಸ್ತೆ ದೂರು ಕೊಟ್ಟಿದ್ದಾರೆ. ದೂರಿನ ಮೇಲೆ ಕಾನೂನಿನ ರೀತಿ ಕ್ರಮ ಮಾಡ್ತಾರೆ. ಅದರ ಬಗ್ಗೆ ಇನ್ನೂ ಡೀಟೈಲ್ಸ್ ತೆಗೆದುಕೊಳ್ಳಬೇಕು. ಅವರು ಮಾಡಿದ್ದಾರೆ ಅಂದರೆ ಕಾನೂನು ಬಾಹಿರವಾಗಿದೆ. ಪಬ್ಲಿಕ್ ಸರ್ವೆಂಟ್ಸ್ ಈ ರೀತಿ ಮಾಡಿದ್ರೆ ಕಾನೂನಿನ ರೀತಿಯಲ್ಲಿ ಕ್ರಮ ಆಗುತ್ತದೆ. ನಾವು ದ್ವೇಷದ ರಾಜಕಾರಣ ಮಾಡೋದಿಲ್ಲ. ಇನ್ನೂ ಅವ್ರು ಮಾಡ್ತಿದ್ದಾರೆ. ನಮಗೆ ದ್ವೇಷದ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಜನರು ನಮ್ಮನ್ನು ಗೆಲ್ಲಿಸಿದ್ದಾರೆ. ಅದರ ಪ್ರಕಾರ ನಾವು ಕೆಲಸ ಮಾಡ್ತಿದ್ದೇವೆ ಅಂತ ಹೇಳಿದ್ರು.
PublicNext
19/09/2024 05:43 pm