ಉಡುಪಿ: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ, ಮೋರ್ಚಾದ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಉಪಾಧ್ಯಕ್ಷೆ ಸುನಿತಾ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಶೇಕ್ ಆಸೀಫ್, ಮೋರ್ಚಾದ ಬೈಂದೂರು ಮಂಡಲ ಅಧ್ಯಕ್ಷ ಅಂತೋನಿ ಡಿಸೋಜ, ವಿಜಯ ಬಾಲ ನಿಕೇತನದ ಉಪಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಮಟಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ ಪೂಜಾರಿ ಉಪಸ್ಥಿತರಿದ್ದರು.
Kshetra Samachara
19/09/2024 06:16 pm