ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ - ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ವೇಲ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ನಟ ದರ್ಶನ್ ಹಾಗೂ ಇನ್ನಿತರ ಆರೋಪಿಗಳಿಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಸಂಬಂಧ ವಿಚಾರಣಾಧೀನ ಕೈದಿಗಳಾಗಿರುವ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲುನನ್ನು ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣದ ತನಿಖೆ‌ ನಡೆಸುತ್ತಿರುವ ಪೊಲೀಸರು ಇಂದು 9ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಮೂರು‌ ದಿನಗಳ‌ ಕಾಲ‌ ಅಂದರೆ ಸೆಪ್ಟೆಂಬರ್‌ 21 ಸಂಜೆ 4.30ರವರೆಗೆ ಪೊಲೀಸ್ ವಶಕ್ಕೆ ಪಡೆದುಕೊಳ್ಳಲು ಅನುಮತಿ ಪಡೆದುಕೊಂಡು ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ವಿಲ್ಸನ್ ಗಾರ್ಡನ್ ನಾಗ, ದರ್ಶನ್, ಕುಳ್ಳ ಸೀನಾ ಹಾಗೂ ದರ್ಶನ್ ಸಹಚರ ನಾಗರಾಜು ಇರುವ ಫೋಟೋವನ್ನು ನಾಗನ ಸಹಚರ ವೇಲು ಮೊಬೈಲ್ ನಲ್ಲಿ ಸೆರೆಹಿಡಿದಿದ್ದ. ಈ ಫೋಟೋದಲ್ಲಿ ದರ್ಶನ್ ಒಂದು ಕೈನಲ್ಲಿ ಕಾಫಿ ಮಗ್, ಇನ್ನೊಂದು ಕೈಯಲ್ಲಿ ಸಿಗರೇಟು ಸೇವನೆ ಮಾಡುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಗ್ರಾಸವಾಗಿ ಜೈಲಿನ‌ ಅಧೀಕ್ಷಕರು ಸೇರಿ 9 ಕ್ಕಿಂತ ಹೆಚ್ಚು ಸಿಬ್ಬಂದಿ ಅಮಾನತಾಗಿದ್ದರು. ಅಲ್ಲದೆ ದರ್ಶನ್ ಗ್ಯಾಂಗ್ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣ ದಾಖಲಾಗಿತ್ತು.

Edited By : Manjunath H D
PublicNext

PublicNext

19/09/2024 08:45 pm

Cinque Terre

19.31 K

Cinque Terre

1

ಸಂಬಂಧಿತ ಸುದ್ದಿ