ಧಾರವಾಡ: ಇಂದು 13 ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ಧಾರವಾಡದಲ್ಲಿ ಅದ್ಧೂರಿಯಾಗಿ ನಡೆಯಿತು.
ಗುರುವಾರ ಧಾರವಾಡ ಹೆಬ್ಬಳ್ಳಿ ಅಗಸಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಧಾರವಾಡ ಕಾ ರಾಜಾ ಗಣಪತಿ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಿತು. ಈ ವೇಳೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಸ್ವತಃ ಗಣಪತಿ ಮೂರ್ತಿ ಹೊತ್ತ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಗಮನಸೆಳೆದರು.
ಪೊಲೀಸ್ ಆಯುಕ್ತರು ಟ್ರ್ಯಾಕ್ಟರ್ ಚಲಾಯಿಸಿದ್ದನ್ನು ಕಂಡು ಯುವಪಡೆ ಕೇಕೆ, ಶಿಳ್ಳೆ, ಚಪ್ಪಾಳೆ ಹೊಡೆಯುವ ಮೂಲಕ ಕುಣಿದು ಕುಪ್ಪಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2024 10:06 pm