ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಗಮಂಗಲ ಗಲಭೆ ಕೇಸ್‌: ಮತ್ತೊಬ್ಬ ಅಧಿಕಾರಿಯ ತಲೆದಂಡ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್ ಎ.ಆರ್‌. ಅವರನ್ನು ಅಮಾನತು ಮಾಡಲಾಗಿದೆ.

ಮಂಡ್ಯ ಸಿ.ಇ.ಎನ್‌ ಪೊಲೀಸ್‌ ಠಾಣೆಯ ಡಿವೈಎಸ್ಪಿ ಶಿವಮೂರ್ತಿ ಜಿ.ಆರ್‌. ಅವರಿಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಾಗಮಂಗಲ ನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್​ ಆಗಿದ್ದ ಅಶೋಕ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿತ್ತು. ಗಲಭೆಗೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಜಿಪುಣತನವೇ ಕಾರಣ ಎಂಬ ಅನುಮಾನ‌ ಮೂಡಿತ್ತು. ರಿಜರ್ವ್ ಸಿಬ್ಬಂದಿಗೆ ಊಟ ಕೊಡಿಸಲು ಹಿಂದೇಟು ಹಾಕಿದ ಇನ್ಸ್‌ಪೆಕ್ಟರ್, ಭದ್ರತೆಗೆ ಬಂದಿದ್ದ ಡಿಎಆರ್​ ಸಿಬ್ಬಂದಿನ ಬೆಳ್ಳೂರಿಗೆ ಶಿಫ್ಟ್ ಮಾಡಿದ್ದರು. ರಿಸರ್ವ್ ‌ವಾಹನ ಹೊರಟ ಅರ್ಧ ಗಂಟೆಗೆ ಗಲಭೆ ನಡೆದಿತ್ತು. ಈ ವೇಳೆ ನಿರ್ಲಕ್ಷ್ಯ ತೋರಿದ ಅಶೋಕ್ ಕುಮಾರ್​ನ ಸಸ್ಪೆಂಡ್ ಮಾಡಲಾಗಿತ್ತು.

Edited By : Vijay Kumar
PublicNext

PublicNext

20/09/2024 01:33 pm

Cinque Terre

5.77 K

Cinque Terre

1

ಸಂಬಂಧಿತ ಸುದ್ದಿ