ಬೆಂಗಳೂರು: ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರೈಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಹಿಂದೆ ಮೊದಲ ಪ್ರಕರಣದಲ್ಲಿ ರೇವಣ್ಣ ಅವರ ಅರ್ಜಿ ಮತ್ತು ನಂತರದ ದೂರುಗಳಿಗೆ ಸಂಬಂಧಿಸಿದ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ವಾದವನ್ನು ಆಲಿಸಿತ್ತು. ಇಂದು ವಿಚಾರಣೆಯ ಸಂದರ್ಭದಲ್ಲಿ ಸಂತ್ರಸ್ತರ ಹೆಸರನ್ನು ನಮೂದಿಸುವುದನ್ನು ತಪ್ಪಿಸುವಂತೆ ಮತ್ತು ಅದರ ಬದಲಿಗೆ, ಪ್ರಕರಣದ ದಾಖಲೆಗಳಲ್ಲಿ ನಿರ್ದಿಷ್ಟ ವಿವರಗಳನ್ನು ಸೂಚಿಸುವಂತೆ ನ್ಯಾಯಾಲಯವು ವಕೀಲರಿಗೆ ನಿರ್ದೇಶನ ನೀಡಿತು. ಕೋರ್ಟ್ ಕಲಾಪದ ಒಂದು ನೋಟ ಇಲ್ಲಿದೆ.
PublicNext
20/09/2024 03:11 pm