ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: "ಮುನಿರತ್ನ ಮಾತು" ಎರಡೂ ಸಮುದಾಯಗಳ ಸ್ವಾಮೀಜಿಗಳು ಹೋರಾಟ ಮಾಡಬೇಕು- ಡಿ.ಕೆ. ಸುರೇಶ್

ಬೆಂಗಳೂರು: ಶಾಸಕ ಮುನಿರತ್ನ ಒಕ್ಕಲಿಗರು, ದಲಿತರು ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದರ ಬಗ್ಗೆ ಎರಡೂ ಸಮುದಾಯಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ವಾಮೀಜಿಗಳು ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಬೇಕು. ಇಲ್ಲದಿದ್ದರೆ ದಾರಿಯಲ್ಲಿ ಹೋಗುವವರೆಲ್ಲರೂ ಮಾತನಾಡಲು ಪ್ರಾರಂಭ ಮಾಡುತ್ತಾರೆ.

ನಾನು ನನ್ನ ಜೀವಮಾನದಲ್ಲಿಯೇ ಇಂತಹ ಪದಗಳನ್ನು ಕೇಳಿಲ್ಲ. ನಾವುಗಳು ಉತ್ತರ ಪ್ರದೇಶದಲ್ಲಿ ವಾಸಿಸುತ್ತಿಲ್ಲ. ನಾಗರಿಕತೆಯಿರುವ ಕರ್ನಾಟಕದಲ್ಲಿದ್ದೇವೆ. ಮುನಿರತ್ನ ಮಾಡಿರುವ ಕೃತ್ಯಗಳನ್ನು ಇನ್ನೂ ಜೀರ್ಣಿಸಿಕೊಳ್ಳಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿದರು.

Edited By : Manjunath H D
PublicNext

PublicNext

20/09/2024 06:54 pm

Cinque Terre

47.06 K

Cinque Terre

0

ಸಂಬಂಧಿತ ಸುದ್ದಿ