ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಎಐಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾನಿಲಯದ ಸಾಫ್ಟ್ ವೇರ್ ದೋಷ ಪೂರಿತವಾಗಿದ್ದು ಪರೀಕ್ಷೆ ಬರೆದು ಹಲವಾರು ತಿಂಗಳುಗಳೇ ಕಳೆದರೂ ವಿದ್ಯಾರ್ಥಿಗಳ ಅಂಕಪಟ್ಟಿ ಇನ್ನೂ ಸಿಕ್ಕಿಲ್ಲ. ಇನ್ನು ಕೆಲ ವಿದ್ಯಾರ್ಥಿಗಳ ಅಂಕಪಟ್ಟಿ ಪರೀಕ್ಷಿಸಿದರೆ ಪರೀಕ್ಷೆ ಬರೆದಿದ್ದರೂ ಸಾಫ್ಟ್ ವೇರ್ ನಲ್ಲಿ ಗೈರು ಹಾಜರಿ ತೋರಿಸುತ್ತಿದೆ. ಇದರ ಬಗ್ಗೆ ವಿಶ್ವ ವಿದ್ಯಾನಿಲಯದ ಯಾರೊಬ್ಬರೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನು ಶೀಘ್ರದಲ್ಲಿ ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ರು.
PublicNext
10/10/2024 03:12 pm