ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021 ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು 2021ರ ನವೆಂಬರ್ 27 ರಂದು ರಾತ್ರಿ ಮೂಡಿಗೆರೆ ತಾಲೂಕಿನ ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣದಲ್ಲಿನ ಎರಡು ಜನ ಆರೋಪಿಗಳಿಗೆ ಘನ ನ್ಯಾಯಾಲಯವು ಶಿಕ್ಷೆ ಮತ್ತು ದಂಡ ವಿಧಿಸಿದೆ.
ಪ್ರಕರಣದಲ್ಲಿನ 1ನೇ ಆರೋಪಿಯಾದ ಬಾಳೂರು ಕೃಷ್ಣೇಗೌಡನಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ ದಂಡ ಮತ್ತು 2ನೇ ಆರೋಪಿಯಾದ ಉದಯ ಬಿ ಸಿ ಈತನಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು ರೂ. 3 ಸಾವಿರ ದಂಡ ವಿಧಿಸಿ ನಿನ್ನೆ ಘನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
Kshetra Samachara
11/10/2024 02:46 pm