ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್

ಬೆಂಗಳೂರು: 50 ಕೋಟಿ ರೂಪಾಯಿ ನೀಡುವಂತೆ ಜೀವ ಬೆದರಿಕೆ ಆರೋಪದಡಿ ಇತ್ತೀಚೆಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಮಾರಸ್ವಾಮಿ ಎಫ್ಐಆರ್ ದಾಖಲಾದ ಬೆನ್ನಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ) ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ್ದು ಈ ಸಂಬಂಧ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಶಾಸಕ ಸುರೇಶ್ ಬಾಬು ವಿರುದ್ಧ ದೂರು ದೂರು ನೀಡಿದ್ದಾರೆ.

ವೈಯಕ್ತಿಕ ತೇಜೋವಧೆ ಹಾಗೂ ಭ್ರಷ್ಟಾಚಾರ ಆರೋಪ ಹೊರಿಸಿದ ಕುಮಾರಸ್ವಾಮಿ ವಿರುದ್ಧ ಸಂಜಯನಗರ ಠಾಣೆ ಪೊಲೀಸರು ಎನ್ ಸಿಆರ್ (ಗಂಭೀರ ಸ್ವರೂಪವಲ್ಲದ ಅಪರಾಧ) ದಾಖಲಾಗಿದೆ.

ಅಕ್ರಮ ಗಣಿಗಾರಿಕೆ ಕುರಿತಂತೆ ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯಾಧಾರ ಲಭ್ಯವಾದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಚಂದ್ರಶೇಖರ್ ಅವರು ಪತ್ರ ಬರೆದಿದ್ದರು. ಈ ಸಂಬಂಧ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಜೀವ ಬೆದರಿಕೆ ಹಾಕಿದ್ದಾರೆ. ಪುತ್ರ ನಿಖಿಲ್ ಕುಮಾರಸ್ವಾಮಿ ದುರುದ್ದೇಶಪೂರಿತ ಹೇಳಿಕೆ ನೀಡಿದ್ದಾರೆ. ಶಾಸಕ ಸುರೇಶ್ ಬಾಬು ಸಹ ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದು, ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸುಳ್ಳು ದಾಖಲಾತಿ ಸೃಷ್ಟಿಸಿ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸುವ ಮೂಲಕ ಕರ್ನಾಟಕ ಕೇಡರ್ ಆಗಿ ಮುಂದುವರೆದಿದ್ದಾರೆ. ರಾಜ್ಯ ಕೇಡಾರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಸಿದ್ದಾರೆ. ತನ್ನ ಕುಟುಂಬದವರ ವಿರುದ್ಧವು ಸುಳ್ಳು ಆರೋಪ ಹೊರಿಸಿ ತೊಂದರೆ ಕೊಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ದೂರಿನಲ್ಲಿ ವಿವರಿಸಿದ್ದಾರೆ.

Edited By : Nagaraj Tulugeri
PublicNext

PublicNext

11/10/2024 10:56 pm

Cinque Terre

29.46 K

Cinque Terre

3