ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಳಸ ಪಟ್ಟಣದಲ್ಲಿ ಅದ್ದೂರಿಯಾಗಿ ನೆರವೇರಿದ ದುರ್ಗಾದೇವಿ ವಿಸರ್ಜನೆ

ಚಿಕ್ಕಮಗಳೂರು: ಜಿಲ್ಲೆಯ ಕಳಸ ಪಟ್ಟಣದಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ದುರ್ಗಾದೇವಿ ಮೂರ್ತಿ ವಿಸರ್ಜನಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಶ್ರೀ ದುರ್ಗಾ ಸೇವಾ ಸಮಿತಿಯಿಂದ ಶ್ರೀ ದುರ್ಗಾ ಮಾತೆ ದೇವಿ ವಿಗ್ರಹ ಪ್ರತಿಷ್ಠಾಪಿಸಿ 9 ದಿನಗಳ ಕಾಲ ದೇವಿಯ ವಿವಿಧ ರೂಪವನ್ನು ಆರಾಧಿಸುವ ಮೂಲಕ ಅರ್ಥಪೂರ್ಣವಾಗಿ ದೇವಿಯ ಆರಾಧನೆಯನ್ನು ನೆರವೇರಿಸಲಾಯಿತು.

ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯಂದು ಶ್ರೀ ದುರ್ಗಾದೇವಿಯನ್ನು ದೀಪಾಲಂಕಾರಗೊಂಡಿದ್ದ ಭವ್ಯ ಮಂಟಪದಲ್ಲಿ ಕುಳ್ಳರಿಸಿ ಪಟ್ಟಣದ ಕಳಸೇಶ್ವರ ರಥ ಬೀದಿಯಾಗಿ ಮೆರವಣಿಗೆ ನಡೆಸಿ ಕೋಟೆ ತೀರ್ಥದಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಆರ್ಕೆಸ್ಟ್ರಾ ಹಾಗೂ ಡಿಜೆ ಸದ್ದಿಗೆ ಯುವಕರು ಸಕ್ಕತ್ ಸ್ಟೆಪ್ಸ್ ಹಾಕಿದ್ರು.

Edited By : Nagesh Gaonkar
PublicNext

PublicNext

12/10/2024 09:16 pm

Cinque Terre

43.11 K

Cinque Terre

0

ಸಂಬಂಧಿತ ಸುದ್ದಿ