ಶಿವಮೊಗ್ಗ : ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದ ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಜಯ ದಶಮಿ ದಿನದಂದು ಹೊಸನಗರ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟದಲ್ಲಿ ಆಯೋಜಿಸಿದ್ದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಮುಖ ಮಂಟಪ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಮುಜರಾಯಿ ಇಲಾಖೆಯ ಮುಷ್ಟಿಯಲ್ಲಿ ಹಿಂದೂ ದೇವಾಲಯಗಳ ಜುಟ್ಟು, ಜನಿವಾರ ಇದೆ ಅಂತಾ ಆಕ್ರೋಶ ಹೊರ ಹಾಕಿದ್ದಾರೆ. ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ತಾರತಮ್ಯ ಮಾಡ್ತಿದೆ. ಸರ್ಕಾರ ಮುಜರಾಯಿ ಖಜಾನೆಯ ಹಣವನ್ನು ಕ್ರೈಸ್ತ, ಇಸ್ಲಾಂ ಪ್ರಾರ್ಥನಾ ಸ್ಥಳಗಳ ಅಭಿವೃದ್ಧಿ ಹಂಚಿಕೆ ಮಾಡುವುದಕ್ಕೆ ವ್ಯಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡದೇ, ಹಿಂದೂಗಳಿಗೆ ಮೋಸ ಮಾಡುತ್ತಿದ್ದು, ಇದರಿಂದ ಎಲ್ಲರೂ ಎಚ್ಚರವಾಗಿರಿ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
PublicNext
13/10/2024 08:57 am