ಮೂಡಿಗೆರೆ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ಭಜನೆ ನಡೆಯಿತು. ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು.
ಸಂಜೆ ಮಳೆಯ ನಡುವೆಯೂ ಭಕ್ತರು ಪಟ್ಟಣದಲ್ಲಿ ಭಜನೆ ನಡೆಸಿದರು. ಭಜನಾ ಕುಣಿತ ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಯಿತು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು. ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ,ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.
Kshetra Samachara
13/10/2024 10:11 am