ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಇಟ್ಟ ರಾಮನ ಬಾಣ ಹುಸಿಯಲ್ಲ - ಅಚ್ಚರಿ ಮೂಡಿಸಿದ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ಮಹಾನವಮಿ ಬಯಲಿನಲ್ಲಿ ಇಂದು ನಸುಕಿನ ಜಾವ 4:45ರ ಸುಮಾರಿಗೆ ಕಾರ್ಣಿಕ ನುಡಿಯಲಾಯಿತು. ಆತಂಕದ ದೈವವಾಣಿಯನ್ನು ಗೊರವಯ್ಯ ನುಡಿದಿದ್ದಾರೆ. ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕವನ್ನು ಗೊರವಯ್ಯ ನುಡಿದಿದ್ದು, ಇಟ್ಟ ರಾಮನ ಬಾಣ ಹುಸಿಯಿಲ್ಲ. ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವ ರಾಶಿಗೆ ಸಂಪಾಯಿತಲೇ ಪರಾಕ್ ಎಂದಿದ್ದಾರೆ.

ಅಂದರೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಕಲ ಜೀವರಾಶಿಗಳು ಸಂಪಾಗಿರುತ್ತದೆ. ಅದೇ ರೀತಿ ರಾಜ್ಯದಲ್ಲಿ ಮುಂದೆ ನಡೆಯಬಹುದಾದ ಅನಾಹುತಗಳ ಬಗ್ಗೆ ಜ್ಞಾನಿಗಳು ತಿಳಿಸುತ್ತಾರೆ. ಹೀಗಾಗಿ, ಜನರು ಜ್ಞಾನಿಗಳು ನುಡಿಯುವ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸಿ. ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಕೆಲವರು ಜೈಲು ಪಾಲಾಗಿದ್ದಾರೆ. ಈ ಪ್ರಕರಣಗಳಲ್ಲಿ ಸತ್ಯಕ್ಕೆ ಜಯವಾಗುವುದಿಲ್ಲ. ಅನ್ಯಾಯದ ದಾರಿಯಲ್ಲಿದ್ದವರಿಗೆ ಜಯವಾಗುತ್ತದೆ. ಇದೆಲ್ಲದರ ನಡುವೆಯೇ ರಾಜ್ಯದ ಜನತೆಗೆ ಒಳ್ಳೆಯದಾಗಲಿದೆ ಎಂದಿದ್ದಾರೆ..

Edited By : Ashok M
PublicNext

PublicNext

13/10/2024 01:46 pm

Cinque Terre

30.16 K

Cinque Terre

0

ಸಂಬಂಧಿತ ಸುದ್ದಿ