ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ನೀಡಿದ ಕುಂಬಳಗೋಡು ಠಾಣೆ ಪೊಲೀಸರು

ರಾಮನಗರ : ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ವಿಚಾರಣೆಗೆ ಬರುವಂತೆ 'ಬಿಗ್‌ಬಾಸ್' ಆಯೋಜಕರಿಗೆ ನೋಟಿಸ್‌ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದಿಂದ ದೂರು ದಾಖಲಿಸಿದ್ದು, ಮಹಿಳಾ ಆಯೋಗದ ದೂರು ಆಧರಿಸಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

'ಬಿಗ್‌ಬಾಸ್' ಸೆಟ್‌ಗೆ ತೆರಳಿ ಇನ್‌ಸ್ಪೆಕ್ಟರ್ ಮಂಜುನಾಥ್ ಹೂಗಾರ ಅವರು ನೋಟಿಸ್ ನೀಡಿದ್ದಾರೆ. ಸ್ವರ್ಗ ನರಕ ವಿಚಾರವಾಗಿ ನಡೆದ ಸಂಭಾಷಣೆಯ ರಾ ಫುಟೇಜ್ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಒಂದು ವೇಳೆ ಅಸಡ್ಡೆ ತೋರಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

13/10/2024 04:33 pm

Cinque Terre

2.24 K

Cinque Terre

0

ಸಂಬಂಧಿತ ಸುದ್ದಿ