ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಆಟೋ ಡಿಕ್ಕಿಯಾಗಿ, ಒರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಚಿತ್ರದುರ್ಗ ಹೊರ ವಲಯದ ಕ್ಯಾದಿಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ 31 ವರ್ಷದ ಕಿರಣ್ ಕುಮಾರ್ ಎಂಬಾತ ಮೃತಪಟ್ಟಿದ್ದಾನೆ ಆಟೋ ಚಾಲಕ ಶಶಿಧರ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೆಂಗಳೂರಿಂದ ಆಟೋದಲ್ಲಿ ದಾವಣಗೆರೆ ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಟೋ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Kshetra Samachara
13/10/2024 05:47 pm