ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೃಂಗೇರಿ: ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಅದ್ಧೂರಿ ಅಡ್ಡ ಪಲ್ಲಕ್ಕಿ ಮಹಾ ರಥೋತ್ಸವ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಶೃಂಗೇರಿ ಶ್ರೀ ಶಾರದಂಬೆಯ ಮಹಾರಥೋತ್ಸವ ಇಂದು ಅದ್ಧೂರಿಯಾಗಿ ಜರುಗಿತು.

ಪ್ರತಿ ವರ್ಷದಂತೆ ಈ ಬಾರಿಯೂ ನವರಾತ್ರಿಯ 11ನೇ ದಿನದಂದು ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಉತ್ಸವ ನಡೆಯಿತು. ವರ್ಷಕ್ಕೊಮ್ಮೆ ನಡೆಯುವ ಅಡ್ಡ ಪಲ್ಲಕ್ಕಿ ಹಾಗೂ ಮಹಾರಥೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು.

ಶೃಂಗೇರಿಯ ಮುಖ್ಯಬೀದಿಗಳಲ್ಲಿ ರಥೋತ್ಸವದ ಮೆರವಣಿಗೆ ನಡೆಯಿತು. ಮಹೋತ್ಸವದ ಅಂಗವಾಗಿ ಶಾರದಾ ಪೀಠದ ಎರಡು ಆನೆಗಳಿಗೂ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಆಕರ್ಷಕ ಸ್ತಬ್ಧ ಚಿತ್ರಗಳು ನೆರೆದಿದ್ದವರ ಮನಸೂರೆಗೊಂಡವು.

Edited By : Shivu K
PublicNext

PublicNext

13/10/2024 06:48 pm

Cinque Terre

28.32 K

Cinque Terre

0

ಸಂಬಂಧಿತ ಸುದ್ದಿ