ಕೊಡಗು : ಪ್ರೇಮಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ ಪದ್ಮಿನಿ ಎಂಬುವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಮೃತ ಪತಿ. ಪತ್ನಿ ಶ್ರೀಜಾ (24) ಹತ್ಯೆಗೈದ ಆರೋಪಿ. ಈ ದಂಪತಿ ಕಳೆದ ೧೦ ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಭಾನುವಾರ ಪತಿ ಧರ್ಮ ಹಾಗೂ ಪತ್ನಿ ಶ್ರೀಜಾ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಈ ಸಂದರ್ಭ ಪತ್ನಿ ಶ್ರೀಜಾ ತನ್ನ ಕೈಯಲ್ಲಿದ್ದ ಚಾಕುವಿನಿಂದ ಆತನನ್ನು ಇರಿದಿದ್ದಾಳೆ. ಪರಿಣಾಮ ಧರ್ಮ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಶ್ರೀಜಾಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು. ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
14/10/2024 10:18 am