ಸಕಲೇಶಪುರ: ಹದಗೆಟ್ಟ ರಸ್ತೆ ಹಾಗೂ ವೀಕೆಂಡ್ ಮುಗಿದ ಹಿನ್ನಲೆ ಸಕಲೇಶಪುರ ತಾಲ್ಲೂಕಿನ, ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ದೇವಸ್ಥಾನ, ಪ್ರವಾಸಿ ತಾಣಗಳಿಗೆ ತೆರಳಿದ್ದ ಸಾವಿರಾರು ಮಂದಿ ತಮ್ಮ, ತಮ್ಮ ಊರುಗಳಿಗೆ ವಾಹನಗಳಲ್ಲಿ ವಾಪಾಸ್ ಆಗುತ್ತಿರುವ ಹಿನ್ನೆಲೆ ಭಾನುವಾರ ರಾತ್ರಿ 9:00ಯ ಸಮಯದಲ್ಲಿ ಸಕಲೇಶಪುರ ತಾಲ್ಲೂಕಿನ, ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಕಿಲೋಮಿಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸಕಲೇಶಪುರದಿಂದ ಮಾರನಹಳ್ಳಿವರೆಗೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಗುಂಡಿಮಯ ಆಗಿರುವ ಕಾರಣ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
PublicNext
14/10/2024 11:22 am