ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ನಡೆದಿದೆ.
ಘಟನೆಯಲ್ಲಿ ಬೆಂಗಳೂರು ಮೂಲದ ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುವಾಗ ಸಂಪಿಗೆಖಾನ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿರುವ ಪರಿಣಾಮ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಂಬುಲೆನ್ಸ್ ಚಾಲಕ ಶರೀಫ್ ಗಾಯಾಳುಗಳನ್ನು ಕಳಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
14/10/2024 11:31 am