ಚಳ್ಳಕೆರೆ: ಗ್ರಾಮದಲ್ಲಿನ ಮದ್ಯದ ಅಂಗಡಿ ತೆರವು ಮಾಡುವಂತೆ ಗ್ರಾಮಸ್ಥರು ಹಾಗೂ ಪಂಚಾಯಿತಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಜನವಸತಿ ವಸತಿ ಪ್ರದೇಶದಲ್ಲಿ ಮದ್ಯದ ಅಂಗಡಿ ಇರುವುದರಿಂದ ಕುಡುಕರ ಹಾವಳಿ ಹೆಚ್ಚಾಗಿದೆ.. ಅಲ್ಲದೇ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಮಾರಮ್ಮ ದೇವಿಯ ದೇವಸ್ಥಾನವಿದೆ..ಇನ್ನು ಕಾಲೋನಿ ನಿವಾಸಿಗಳಿಗೆ ಹಾಗೂ ದೇವಸ್ಥಾನಕ್ಕೆ ತೆರಳುವ ಮಹಿಳೆಯರಿಗೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಕಿರಿಕಿರಿ ಉಂಟಾಗಿದೆ.
ಇದರಿಂದ ಕೂಡಲೇ ಮದ್ಯದ ಅಂಗಡಿ ತೆರವುಗೊಳಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರತಿಭಟನೆ ನೇತೃತ್ವ ವಹಿಸಿದ್ದ ಗ್ರಾಪಂ ಅಧ್ಯಕ್ಚ ಓಬಣ್ಣ, ಸದಸ್ಯ ಶಶಿಧರ್ ಮಾತನಾಡಿ, ಶಾಲೆಗಳು ಇರುವ ಜಾಗದಲ್ಲಿ ಮದ್ಯದಂಗಡಿಗೆ ಅವಕಾಶವಿಲ್ಲ, ಆದರೂ ಮದ್ಯದಂಗಡಿ ಗ್ರಾಮದ ಮಧ್ಯ ಭಾಗದಲ್ಲಿ ಚಾಲ್ತಿಯಿದೆ..
ಇನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ನೀಡಿದ್ದಿರೂ ಯಾವುದೇ ಪ್ರಯೋಜನವಾಗಿಲ್ಲ, ಕೂಡಲೇ ತಾಲೂಕು ಮಟ್ಟದ ಅಧಿಕಾರಿಗಳು ಮದ್ಯದ ಅಂಗಡಿ ತೆರವು ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
PublicNext
14/10/2024 12:43 pm