ಕಲಬುರಗಿ: ಬೆಳಗಾವಿಯಲ್ಲಿ ಇದೇ ಅಕ್ಟೋಬರ್ 23 ರಿಂದ ನಡೆಯಲಿರುವ ಕಿತ್ತೂರು ಉತ್ಸವ-2024 ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯ ಜ್ಯೋತಿ ಯಾತ್ರೆಯು ಚಿತ್ತಾಪುರ ತಾಲೂಕು ಮೂಲಕ ಕಲಬುರಗಿ ಜಿಲ್ಲೆ ಪ್ರವೇಶಿಸಿದೆ.
ಸಹಬಾದ ತಾಲೂಕಿನ ಧರ್ಮಾಪುರ ಗ್ರಾಮದ ಬಳಿ ಶಹಾಬಾದ ಗ್ರೇಡ್-2 ತಹಶೀಲ್ದಾರ ಗುರುರಾಜ ಸಂಗಾವಿ ಅವರು ಯಾತ್ರೆಯನ್ನು ಕಲಬುರಗಿ ತಹಶೀಲ್ದಾರ ಆನಂದಶೀಲ ಕೆ. ಅವರಿಗೆ ಹಸ್ತಾಂತರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿದಂತೆ ಅನೇಕರು ಇದ್ದರು.
ವೀರ ಮಹಿಳೆ ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ಹೋರಾಡಿ ವಿಜಯ ಸಾಧಿಸಿದ 200ನೇ ವರ್ಷಾಚರಣೆಯ ಈ ವಿಜಯ ಜ್ಯೋತಿ ಯಾತ್ರೆ ನಾಡಿನಾದ್ಯಂತ ಸಂಚಾರಕ್ಕೆ ಕಳೆದ ಅಕ್ಟೋಬರ್ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದರು.
Kshetra Samachara
14/10/2024 01:09 pm