ಸೊಲ್ಲಾಪುರ : ದುರ್ಗಾ ಮಾತಾ ವಿಸರ್ಜನೆ ವೇಳೆ ಎರಡು ಕೋಮುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಸೀದಿ ಎದುರು ಹಾಡು ಹಾಕಿದ ಕಾರಣ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 5 ಬೈಕ್ ಗಳು ಹಾಗೂ ಕಾರುಗಳಿಗೆ ಕಿಡಗೇಡಿಗಳು ಕಲ್ಲುಗಳನ್ನು ಎಸೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಗ್ರಾಮದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಂಕೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
14/10/2024 04:05 pm