ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ನದಿಯಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ

ಬೆಳಗಾವಿ : ನೀರು ಕುಡಿಯಲು ಹೋಗಿದ್ದ ಬಾಲಕ ಕಾಲುಜಾರಿ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದ, ಸತತ 22 ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನ ಶವ ಪತ್ತೆಯಾಗಿದೆ.‌ ರವಿವಾರ ಮದ್ಯಾಹ್ನ ಗೋಕಾಕ್ ನಗರದ ಮಾರ್ಕಂಡೆಯ ನದಿ ತೀರದ ಹೆಜ್ಜೆಗಾರ ಹೊಲದ ಹತ್ತಿರ ನೀರು ಕುಡಿಯಲು ಹೋಗಿದ್ದ ಸಾಗರ ಗೌಳಿ (16) ಬಾಲಕ ಕಾಲು ಜಾರಿ ಹರಿಯುತ್ತಿರುವ ನದಿಯಲ್ಲಿ ಕೊಚ್ಚಿ ಹೊಗಿದ್ದ. ಯುವಕನಿಗಾಗಿ ಹುಡುಕಾಟ ಮುಂದುವರಿದಿತ್ತು. ಅಗ್ನಿ ಶಾಮಕ ದಳ ಹಾಗೂ ಎಸ್. ಡಿ.ಆ‌ರ್.ಎಫ್ ಸಿಬ್ಬಂದಿ ತೀವ್ರ ತಪಾಸಣೆ ನಂತರ ಯುವಕನ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಅಗ್ನಿ ಶಾಮಕ ತಾಲೂಕಾ ಅಧಿಕಾರಿ ಸದಾನಂದ ಮೇಳವಂಕಿ ಹಾಗು ಇನ್ನಿತರರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

14/10/2024 07:38 pm

Cinque Terre

28.66 K

Cinque Terre

0