ಹೊನ್ನಾವರ : ತಾಲೂಕಿನ ಹಳದಿಪುರ ಆರ್.ಇ. ಎಸ್ ಪ್ರೌಢಶಾಲೆ ವಿದ್ಯಾರ್ಥಿನಿ ಚೈತ್ರಾ ಹನುಮಂತ ಮುಕ್ರಿ ಇವಳು ಇತ್ತೀಚಿಗೆ 17 ವಯೋಮಾನದ ಬಾಲಕಿಯರ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ದೈಹಿಕ ಶಿಕ್ಷಕ ಮಹೇಶ ಶೆಟ್ಟಿ ಇವರಿಂದ ತರಬೇತಿ ಪಡೆದಿರುವ ಈಕೆ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಶಾಲೆಗೆ, ಊರಿಗೆ, ಪಾಲಕರಿಗೆ, ಶಿಕ್ಷಕರಿಗೆ ಕೀರ್ತಿ ತಂದಿರುತ್ತಾಳೆ. ಇವರಿಂದ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳು ಇನ್ನಿತರ ಕ್ರೀಡಾ ಚಟುವಟಿಕೆಯಲ್ಲಿ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿನಿ ಸಾಧನೆಗೆ ಶಾಲಾ ಮುಖ್ಯಧ್ಯಾಪಕರು, ಶಿಕ್ಷಕರು, ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
14/10/2024 09:28 pm