ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸಾರ್ವಜನಿಕರ ವಿರೋಧದ ನಡುವೆಯೂ ಬೆಳ್ಳಂಬೆಳಿಗ್ಗೆ ಫುಟ್‌ಪಾತ್ ತೆರವು ಕಾರ್ಯಾಚರಣೆ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ಪುರಸಭೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಿದರು. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಡೆಗಳಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಇನ್ನು ತಹಶೀಲ್ದಾರ ಹಾಗೂ ಪುರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ನಡೆಸುತ್ತಿದ್ದಾರೆ. ಸಣ್ಣಪುಟ್ಟ ವ್ಯಾಪಾರಸ್ಥರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಅತಿಕ್ರಮಣಗೊಂಡ ಗಣ್ಯ ವ್ಯಕ್ತಿಗಳನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

Edited By : Ashok M
PublicNext

PublicNext

15/10/2024 11:23 am

Cinque Terre

22.85 K

Cinque Terre

0