ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರದ ಹಿಂದೆ ಡಿಕೆಶಿ ಕೈವಾಡ : ದೇವರಾಜೇಗೌಡ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಬೀಳಿಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಒಬ್ಬ ಸಾಮಾನ್ಯ ವ್ಯಕ್ತಿ ಬಂದು ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿ ಅವರ ವಿರುದ್ಧ ದ್ವನಿ ಎತ್ತಲು ಸಾಧ್ಯವೇ ಇಲ್ಲ ಅದರ ಹಿಂದೆ ಒಂದು ದೊಡ್ಡ ಶಕ್ತಿ ಇದೆ. ಈ ಹಿಂದೆ ಯಾರು ಸಿದ್ದರಾಮಯ್ಯ ಅವರಿಗೆ ಸಮಸ್ಯೆ ಆದರೆ ಅವರ ಪರವಾಗಿ ಬಂಡೆಯಂತೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ದರೋ ಅವರೇ ಒಂದು ಸಿಎಂ ಗೆ ಮಾರಕವಾಗಿದ್ದಾರೆ ಎಂದರು.

ದೂರು ನೀಡಿದ ಸಾಮಾನ್ಯ ವ್ಯಕ್ತಿಗೆ ಬೆನ್ನೆಲುಬಾಗಿ ನಿಂತು ಅವರಿಗೆ ಆರ್ಥಿಕವಾಗಿ ಸಹಾಯ ಮಾಡುವ ಜೊತೆಗೆ, ದಾಖಲೆಗಳನ್ನು ಒದಗಿಸುವ ಕೆಲಸವನ್ನು ಡಿಕೆಶಿ ಮಾಡುತ್ತಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಅಧಿಕಾರ ಹಿಡಿಯುವ ಹುನ್ನಾರ ಮಾಡಿರುವ ಡಿಕೆಶಿ, ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

Edited By : Vinayak Patil
PublicNext

PublicNext

15/10/2024 01:27 pm

Cinque Terre

19.91 K

Cinque Terre

0

ಸಂಬಂಧಿತ ಸುದ್ದಿ