ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರಿನಲ್ಲಿ ಧಾರಕಾರ ಮಳೆ, ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಬೆಳಿಗ್ಗೆಯಿಂದಲೇ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ವಿಜಯಪುರ, ಉಪ್ಪಳ್ಳಿ, ಬೈಪಾಸ್, ಹೌಸಿಂಗ್ ಬೋರ್ಡ್, ರಾಂಪುರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ದ್ವಿಚಕ್ರ ವಾಹನ ಸವಾರರು ಗಂಟೆಗಟ್ಟಲೆ ನಿಂತಲ್ಲೇ ನಿಂತಿರುವ ದೃಶ್ಯಗಳು ಕಂಡು ಬರುತ್ತಿದೆ. ಬಿಡುವು ನೀಡದೆ ಒಂದೇ ಸಮನೆ ಸುರಿದ ಮಳೆಗೆ ಶಾಲೆ, ಕಾಲೇಜುಗಳಿಗೆ ತೆರಳುವ ಮಕ್ಕಳು ಕಚೇರಿಗಳಿಗೆ ತೆರಳುವ ಉದ್ಯೋಗಿಗಳು, ಪಾದಚಾರಿಗಳು ಮಳೆಯಲ್ಲಿಯೇ ನೆನೆದುಕೊಂಡು ಹೋಗುವಂತಾಯಿತು.

Edited By : Ashok M
PublicNext

PublicNext

15/10/2024 02:18 pm

Cinque Terre

18.86 K

Cinque Terre

0

ಸಂಬಂಧಿತ ಸುದ್ದಿ